HR KANNADA CONFERENCE
  • ಸ್ವಾಗತ
    • ನಿರಾತಂಕ ಕುರಿತು
    • ಸಮಿತಿಯ ಸದಸ್ಯರು
    • ಪ್ರಶಸ್ತಿ ಪುರಸ್ಕೃತರು
  • ಸಮ್ಮೇಳನ-2022
    • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2022
    • ಮಹಿಳಾ ಸಬಲೀಕರಣ ಪ್ರಶಸ್ತಿ-2022
    • ಅತ್ಯುತ್ತಮ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್
    • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2022
  • ಹಿಂದಿನ ಸಮ್ಮೇಳನಗಳು
    • 2021
      • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2021
      • ಪ್ರಶಸ್ತಿ ಪುರಸ್ಕಾರ - 2021
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2021
    • 2020
      • ದೇಣಿಗೆ ಸಂಗ್ರಹಣ-2020
      • ಲೇಖನಗಳಿಗಾಗಿ ಆಹ್ವಾನ - 2020
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2020
    • 2019
      • ತೃತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ದೇಣಿಗೆ ಸಂಗ್ರಹಣ
    • 2018
      • ದ್ವಿತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
    • 2017
      • ಪ್ರಥಮ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2017
  • ಆನ್ ಲೈನ್ ಗ್ರೂಪ್ಸ್
  • ಬ್ಲಾಗ್
  • ಮಾಧ್ಯಮ
    • ಛಾಯಾಚಿತ್ರಗಳು
    • ವಿಡಿಯೋ
  • ಪ್ರಾಯೋಜಕತ್ವ
  • ಸಮ್ಮೇಳನದ ಕೈಪಿಡಿಗಳು
  • ಸಂಪರ್ಕಿಸಿ
  • ಸ್ವಾಗತ
    • ನಿರಾತಂಕ ಕುರಿತು
    • ಸಮಿತಿಯ ಸದಸ್ಯರು
    • ಪ್ರಶಸ್ತಿ ಪುರಸ್ಕೃತರು
  • ಸಮ್ಮೇಳನ-2022
    • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2022
    • ಮಹಿಳಾ ಸಬಲೀಕರಣ ಪ್ರಶಸ್ತಿ-2022
    • ಅತ್ಯುತ್ತಮ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್
    • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2022
  • ಹಿಂದಿನ ಸಮ್ಮೇಳನಗಳು
    • 2021
      • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2021
      • ಪ್ರಶಸ್ತಿ ಪುರಸ್ಕಾರ - 2021
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2021
    • 2020
      • ದೇಣಿಗೆ ಸಂಗ್ರಹಣ-2020
      • ಲೇಖನಗಳಿಗಾಗಿ ಆಹ್ವಾನ - 2020
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2020
    • 2019
      • ತೃತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ದೇಣಿಗೆ ಸಂಗ್ರಹಣ
    • 2018
      • ದ್ವಿತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
    • 2017
      • ಪ್ರಥಮ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2017
  • ಆನ್ ಲೈನ್ ಗ್ರೂಪ್ಸ್
  • ಬ್ಲಾಗ್
  • ಮಾಧ್ಯಮ
    • ಛಾಯಾಚಿತ್ರಗಳು
    • ವಿಡಿಯೋ
  • ಪ್ರಾಯೋಜಕತ್ವ
  • ಸಮ್ಮೇಳನದ ಕೈಪಿಡಿಗಳು
  • ಸಂಪರ್ಕಿಸಿ
www.niratanka.org

ಮಾನವ ಸಂಪನ್ಮೂಲ ವೃತ್ತಿಪರರಿಗೆ ಕನ್ನಡ ಭಾಷೆಯ ಪ್ರಸ್ತುತತೆ

11/29/2019

0 Comments

 
Picture
ದಿವ್ಯಾ ಎಂ.
ಕಲ್ಯಾಣಾಧಿಕಾರಿ, ಇಂಡಿಯನ್ ಡಿಸೈನ್ಸ್ ಎಕ್ಸ್‍ಪೋರ್ಟ ಪ್ರೈವೇಟ್ ಲಿ, ಬೆಂಗಳೂರು  

Picture
ಶಿವರಾಜ್ ಕುಮಾರ್ ಎಂ.
ಅತಿಥಿ ಉಪನ್ಯಾಸಕರು, ಸಮಾಜಕಾರ್ಯ ವಿಭಾಗ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯ, ಕೋಲಾರ
ಪೀಠಿಕೆ:
ಪ್ರತಿಯೊಬ್ಬ ವ್ಯಕ್ತಿಯ ಮಹತ್ತರವಾದ ಕನಸು ಕಾಣಲು ಹಾಗೂ ಆ ಕನಸುಗಳನ್ನು ಸಾಕಾರಗೊಳಿಸಿಕೊಂಡು ಎತ್ತರದ ಸ್ಥಾನಕ್ಕೇರಲು ಮತ್ತು ಜೀವನದ ಸವಾಲುಗಳನ್ನು ಯಶಸ್ವಿಯಾಗಿ ನಿಭಾಯಿಸಲು ಸಮರ್ಥನಾಗುವಂತೆ ಮಾಡಲು ಭಾಷೆ ಎಂಬ ಸಾಧನೆ ಅತ್ಯಗತ್ಯ. ಈ ಹಿನ್ನಲೆಯಲ್ಲಿ ಅಭಿವೃದ್ದಿಯ ಪಯಣವು ಸುಗಮವಾಗಿ ಸಾಗಿ ಜವಾಬ್ದಾರಿಯುತ ವ್ಯಕ್ತಿಯಾಗಿ ಹೊರಹೊಮ್ಮಿ ಸಮಾಜದ ಏಳಿಗೆಗಾಗಿ ಕಾಣಿಕೆಯನ್ನು ಹಿಂತಿರುಗಿಸುವ ಸ್ಥಾನದಲ್ಲಿ ಭಾಷೆಯ ಮಹತ್ವ ಅಧಿಕ. ಯಾವುದಾದರು ಒಂದು ವಿಷಯವನ್ನು ಬೇರೆಯವರಿಗೆ ತಲುಪಿಸುವಲ್ಲಿ ಭಾಷೆ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಭಾಷೆ ಒಂದೇ ಆಗಿದ್ದರೆ ಸಂವಹನವು ಅತ್ಯುತ್ತಮವಾಗಿಯೂ ಯಾವುದೇ ಅಡೆತಡೆಗಳಿಲ್ಲದೆ ಸರಾಗವಾಗಿಯೂ ಮತ್ತು ಪರಿಣಾಮಕಾರಿಯಾಗಿಯೂ ನಡೆಯುತ್ತದೆ. ರವಾನಿಸಬೇಕಾದ ಅಥವಾ ತಿಳಿಸಬೇಕಾದ ಮಾಹಿತಿ ಅಥವಾ ವಿಷಯ ಸರಿಯಾಗಿ ತಿಳಿಸಲು ಮಾತೃ ಭಾಷೆಯ ಸಂಹವನ ಬಹಳ ಪರಿಣಾಮಕಾರಿ ಎಂದರೆ ಅತಿಶಯೋಕ್ತಿಯಾಗಲಾರದು. ಪ್ರಸ್ತುತ ಸನ್ನಿವೇಶದಲ್ಲಿ ಕೈಗಾರಿಕೆಗಳಲ್ಲಿ ಆಂಗ್ಲ ಭಾಷೆಯನ್ನು ಹೆಚ್ಚು ಬಳಸುತ್ತಿರುವುದರಿಂದ ಅಲ್ಪ-ಸ್ವಲ್ಪ ಓದಿರುವ ಕಾರ್ಮಿಕರಿಗೆ ವಿಷಯಗಳನ್ನು ಸಲೀಸಾಗಿ ಗ್ರಹಿಸಲು ಕಷ್ಟವಾಗುತ್ತಿದೆ. ಭಾಷೆಯ ಸಮಸ್ಯೆಯು ಕಾರ್ಮಿಕರು ಮತ್ತು ಅಧಿಕಾರಿಗಳ ಮಧ್ಯೆ  ದೊಡ್ಡ ಗೋಡೆಯಾಗಿ ಪರಿಣಮಿಸಿ ಕಂದಕವನ್ನು ಸೃಷ್ಟಿಸುತ್ತಿದೆ.

ಕನ್ನಡ ಭಾಷೆಯ ಪರಂಪರೆ:
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯತೆವುಳ್ಳ ಭಾರತದ ಪುರಾತನ  ಭಾಷೆಗಳಲ್ಲಿ ಒಂದಾದ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು 45 ದಶಲಕ್ಷ ಜನರ ಆಡು ನುಡಿಯಾಗಿದೆ. ಕರ್ನಾಟಕ ರಾಜ್ಯದ ಆಡಳಿತ ಭಾಷೆಯಾದ ಕನ್ನಡವನ್ನು ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತಾನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತ್ತೊಂದನೆಯ ಸ್ಥಾನ ಧಕ್ಕಿರುವುದು ಪ್ರತಿಯೊಬ್ಬ ಕನ್ನಡಿಗನ ಹೆಮ್ಮೆಯ ವಿಷಯ. 2011 ರ ಜಣಗಣತಿಯ ಪ್ರಕಾರ ಜಗತ್ತಿನಲ್ಲಿ 6.4 ಕೋಟಿ ಜನರ ಮಾತೃ ಭಾಷೆ ಕನ್ನಡವಾಗಿದೆ. ಬ್ರಾಹ್ಮಿ ಲಿಪಿಯಿಂದ ರೂಪುಗೊಂಡ ಕನ್ನಡ ಬರಹದ ಮಾದರಿಗಳಿಗೆ ಸಾವಿರಾರು ವರ್ಷಗಳ ಚರಿತ್ರೆಯಿದೆ. ಕನ್ನಡ ಲಿಪಿ ಸುಮಾರು 1500-1600 ವರ್ಷಗಳಿಗಿಂತಲೂ ಹಿಂದಿನದು. 5ನೆ ಶತಮಾನದ ಹಲ್ಮಿಡಿ ಶಾಸನದ ಸಮಯಕ್ಕಾಗಲೆ ಕನ್ನಡವು ಸಾಕಷ್ಟು ಅಭಿವೃದ್ದಿ ಹೊಂದಿತ್ತು. ವಿನೋಬಾ ಭಾವೆ ಕನ್ನಡ ಲಿಪಿಯನ್ನು ಲಿಪಿಗಳ ರಾಣಿಯೆಂದು ಹೊಗಳಿದ್ದಾರೆ.

ಸದ್ಯ ಅಂತರ್ಜಾಲದಲ್ಲಿ ಕನ್ನಡ ಭಾಷೆಯ ಬಳಕೆ ಯಥೇಚ್ಚವಾಗಿದೆ. ಕನ್ನಡ ಭಾಷೆ ವಾಣಿಜ್ಯ ಕ್ಷೇತ್ರದಲ್ಲಿಯೂ ಮುಂಚೂಣಿಯ ಭಾಷೆಯಾಗಿ ಬೆಳೆಯತೊಡಗಿದೆ. ಕನ್ನಡ ಭಾಷೆಯನ್ನು ಪ್ರಮುಖವಾಗಿ ಭಾರತದ ಕರ್ನಾಟಕ ರಾಜ್ಯದಲ್ಲಿ ಹೆಚ್ಚಾಗಿ ಬಳಸಲಾಗುತ್ತಿದೆಯಾದರೂ ನೆರೆಹೊರೆ ರಾಜ್ಯಗಳಲ್ಲಿಯೂ ಸಹ ಕನ್ನಡವನ್ನು ಬಳಸುವ ಜನರಿಗೇನೂ ಕೊರತೆಯಿಲ್ಲ. ವಿಶ್ವದ ಬಹುಪಾಲು ಎಲ್ಲಾ ದೇಶಗಳಲ್ಲಿ ಕನ್ನಡಿಗರು ಇದ್ದು, ಕನ್ನಡ ಸಂಘಟನೆಗಳನ್ನು ಹುಟ್ಟು ಹಾಕಿ, ಕನ್ನಡ ಭಾಷೆಯ ಹಿರಿಮೆಯನ್ನು ವಿದೇಶಿಗರಿಗೂ ತಿಳಿಸುತ್ತಿದ್ದಾರೆ. ಇದು ಕನ್ನಡಿಗರಾದ ನಮಗೆಲ್ಲರಿಗೂ ಹೆಮ್ಮೆಯ ವಿಚಾರವಾಗಿದೆ.

ಹೀಗೆ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಇಡೀ ವಿಶ್ವವೇ ಅಪ್ಪಿ-ಕೊಂಡಾಡುತ್ತಿದ್ದರೂ ಕನ್ನಡ ಭಾಷೆಯನ್ನು ಹೆಚ್ಚಾಗಿ ಬಳಸದ ಕಾರಣ ಭಾಷೆ ಅಳಿವಿನಂಚಿಗೆ ಸಾಗಿದೆ. ದೇಹದ ಯಾವುದಾದರೂ ಅಂಗವನ್ನು ಬಳಸದೇ ಹೋದಲ್ಲಿ ಅದು ಕ್ರಮೇಣ ನಿಷ್ಕ್ರಿಯಗೊಳ್ಳುತ್ತದೆ ಎನ್ನುತ್ತದೆ ಡಾರ್ವಿನರ ಸಿದ್ದಾಂತ. ಹಾಗೆಯೇ ಭಾಷೆಯೊಂದರ ಅಭಿವೃದ್ದಿ ಆ ಭಾಷೆಯ ಬಳಕೆಯಿಂದ ಮಾತ್ರ ಸಾಧ್ಯ ಬಳಸದೇ ಹೋದಲ್ಲಿ ಆ ಭಾಷೆಯ ಒಡಲಿನ ಬಹುತೇಕ ಪದಗಳು ಪದಕೋಶಕ್ಕೆ ಮಾತ್ರ ಸೀಮಿತವಾಗುತ್ತದೆ ಎಂಬುದು ನಗ್ನಸತ್ಯ. ಈ ಹಿನ್ನೆಲೆಯಲ್ಲಿ ಮಾನವ ಸಂಪನ್ಮೂಲ ಅಧಿಕಾರಿಗಳು ತಾವು ಕೆಲಸ ಮಾಡುವ ಸಂಸ್ಥೆಗಳಲ್ಲಿ ಕನ್ನಡ ಭಾಷೆಯನ್ನು ಅವಶ್ಯವಿರುವ ಕಡೆಯೆಲ್ಲಾ ಬಳಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಬೇಕಿದೆ.
 
ಮಾನವ ಸಂಪನ್ಮೂಲ ನಿರ್ವಹಣೆ ಮತ್ತು ಭಾಷೆ:
ಸದ್ಯದ ಪರಿಸ್ಥಿತಿಯಲ್ಲಿ ಮಾನವ ಸಂಪನ್ಮೂಲ ವಿಭಾಗದಲ್ಲಿ ವೃತ್ತಿ ಆಧಾರಿತ ಜವಾಬ್ದಾರಿ ಮತ್ತು ಹೊಣೆಗಾರಿಕೆಗಳನ್ನು ನಿಭಾಯಿಸಲು ಭಾಷೆ ಎಂಬ ಸಾಧನದ ಪ್ರಾಮುಖ್ಯತೆ ಅನಿವಾರ್ಯ. ಈ ವಿಭಾಗದಲ್ಲಿ ಕಾರ್ಯನಿರ್ವಹಿಸಲು ಆಂಗ್ಲ ಭಾಷೆಯ ಬಳಕೆ ಅತ್ಯವಶ್ಯಕ ಆದರೆ ಅನಿವಾರ್ಯತೆ ಅಲ್ಲವೆಂಬುದು ಅಷ್ಟೇ ಸತ್ಯ. ಸಮಾಜಕಾರ್ಯ ವಿಭಾಗದಲ್ಲಿ ಪ್ರಶಿಕ್ಷಣಾರ್ಥಿಯಾಗಿ ಮಾನವ ಸಂಪನ್ಮೂಲ ಅಧ್ಯಯನವನ್ನು ವಸ್ತು ವಿಷಯವನ್ನಾಗಿ ಆಯ್ಕೆ ಮಾಡಿಕೊಂಡ ಪ್ರತಿಯೊಬ್ಬ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಈ ವಿಭಾಗದಲ್ಲಿರುವ ಜವಾಬ್ದಾರಿ ಮತ್ತು ಹೊಣೆಗಾರಿಕೆಗಳನ್ನು ನಿಭಾಯಿಸಲು ಹಾಗೂ ಈ ಕ್ಷೇತ್ರದಲ್ಲಿ ಆಭಿವೃದ್ದಿ ಹೊಂದಲು ಆಂಗ್ಲ ಭಾಷೆಯ ಅರಿವು, ಜ್ಞಾನ, ಮುಖ್ಯವೆಂಬ ವಿವೇಚನೆ ಅಥವಾ ಗೊಂದಲವಿರುತ್ತದೆ. ಹಾಗಿದ್ದರೂ ಪ್ರಸ್ತುತ ಕಾರ್ಯ ಕ್ಷೇತ್ರದಲ್ಲಿ ಕನ್ನಡ ಭಾಷೆ ತನ್ನ ಪ್ರಸ್ತುತತೆ ಉಳಿಸಿಕೊಂಡಿದೆ ಹಾಗೂ ಆಂಗ್ಲ ಭಾಷೆಗಿಂತ ಹೆಚ್ಚಾಗಿ ಕನ್ನಡ ಭಾಷೆಯ ಬಳಕೆಯ ಅನಿವಾರ್ಯತೆ ಇದೆ ಎಂಬುದನ್ನು ಅಲ್ಲಗೆಳೆಯುವಂತಿಲ್ಲ.

ನಿಜ, ಹಲವು ಭಾಷೆಗಳ ಮೇಲೆ ಹಿಡಿತ ಹೊಂದಿರುವ ಮಾನವ ಸಂಪನ್ಮೂಲ ಅಧಿಕಾರಿಗಳಿಗೆ ಅವಕಾಶಗಳು ಹೆಚ್ಚು. ಕಾರ್ಮಿಕ ಮತ್ತು ಆಡಳಿತ ವರ್ಗಗಳ ನಡುವೆ ಸೇತುವೆಯಂತೆ ಕಾರ್ಯನಿರ್ವಹಿಸುವ ಮಾನವ ಸಂಪನ್ಮೂಲ ಅಧಿಕಾರಿಗಳು ಆಡಳಿತ ಮಂಡಳಿಯೊಂದಿಗೆ ವ್ಯವಹರಿಸಲು ಆಂಗ್ಲ ಭಾಷೆಯನ್ನು ಬಳಸಿದರೆ ನೌಕರರೊಂದಿಗೆ ಸಂವಹನ ನಡೆಸಲು ಸ್ಥಳೀಯ ಭಾಷೆಯನ್ನು ಬಳಸಲೇಬೇಕಿದೆ. ಆಡಳಿತವರ್ಗ ಮತ್ತು ಸರಕಾರ ವಿಧಿಸಿದ ಎಲ್ಲ ನಿಯಮಗಳನ್ನು ಪ್ರತಿಯೊಬ್ಬ ಕಾಮಿಕರಿಗೆ ಮನದಟ್ಟು ಮಾಡಿಸುವ ಜವಾಬ್ದಾರಿ ಮಾನವ ಸಂಪನ್ಮೂಲ ಅಧಿಕಾರಿಗಳ ಮೇಲಿರುವುದರಿಂದ ಅವುಗಳನ್ನು ಕಾರ್ಮಿಕರಿಗೆ ಅರ್ಥವಾಗುವ ಭಾಷೆಯಲ್ಲಿ ವಿವರಿಸಬೇಕಿದೆ. ರಾಷ್ಟ್ರಪಿತ ಗಾಂಧೀಜಿಯವರು ಮಾತಿನಲ್ಲಿ ಹೇಳುವುದಾದರೆ ಯಾವುದೇ ವಿಷಯವನ್ನು ಎಷ್ಟೇ ಪರಿಣಿತರು ಮಂಡಿಸಿದರೂ ಅದು ಜನರ ಬುದ್ಧಿಗೆ ಮಾತ್ರ ತಲುಪುತ್ತದೆ, ಆದರೆ ಅದೇ ವಿಚಾರವನ್ನು ಅವರ ಮಾತೃಭಾಷೆಯಲ್ಲಿ ತಿಳಿಸಿದರೆ ಅದು ಅವರ ಹೃದಯಕ್ಕೆ ತಲುಪುತ್ತದೆ. ನೌಕರರು ಯಾವುದೇ ಕಂಪೆನಿಯಲ್ಲಿ ತಮ್ಮ ಕೆಲಸವನ್ನು ಹೊರತು ಪಡಿಸಿದರೆ ಅತಿ ಹೆಚ್ಚು ಸಂವಹನ ನಡೆಸಬೇಕಾಗಿರುವುದು ಮಾನವ ಸಂಪನ್ಮೂಲ ವಿಭಾಗದೊಂದಿಗೆ ಮಾತ್ರ, ಆದ ಕಾರಣ ಮಾನವ ಸಂಪನ್ಮೂಲ ಅಧಿಕಾರಿಯು ಕಾರ್ಮಿಕರ ಭಾಷೆಯನ್ನು ಬಲ್ಲವನಾಗಿದ್ದರೆ ಬಹು ಬೇಗ ಅವರ ಹೃದಯವನ್ನು ತಲುಪಲು ಸಾಧ್ಯವಾಗುತ್ತದೆ.

ಕರ್ನಾಟಕ ರಾಜ್ಯದಲ್ಲಿ ಅಸ್ತಿತ್ವ ಹೊಂದಿರುವ ದೇಶೀಯ ಕಂಪೆನಿಗಳನ್ನೂ ಒಳಗೊಂಡಂತೆ ಬಹುರಾಷ್ಟ್ರೀಯ ಕಂಪೆನಿಗಳಲ್ಲಿ ಕಾರ್ಯ ನಿರ್ವಹಿಸುವ ಮಾನವ ಸಂಪನ್ಮೂಲ ಅಧಿಕಾರಿಗಳಿಗೆ ಆಂಗ್ಲ ಭಾಷೆಯೊಂದಿಗೆ ಕನ್ನಡ ಭಾಷೆಯೂ ಅನಿವಾರ್ಯವಾಗಿದ್ದು, ಆಡಳಿತ ಮಂಡಳಿಯೊಂದಿಗೆ ವ್ಯವಹರಿಸುವಾಗ ಆಂಗ್ಲಭಾಷೆ ಅವಶ್ಯಕವಾಗಿದ್ದರೆ ನೌಕರರೊಂದಿಗೆ ವ್ಯವಹರಿಸುವ ಸಮಯದಲ್ಲಿ ಕನ್ನಡ ಭಾಷೆ ಅನಿವಾರ್ಯವಾಗಿದೆ. ಪತ್ರ, ದಾಸ್ತಾವೇಜು, ಲಿಖಿತ ಸಂವಹನ, ಗಣಕ ಯಂತ್ರದ ಸಹಾಯದೊಂದಿಗೆ ಜರುಗುವ ಈ ಮೇಲ್ ಸಂವಹನ ಇತ್ಯಾದಿಗಳಿಗೆ ಆಂಗ್ಲ ಭಾಷೆ ಅವಶ್ಯಕ ನಿಜ. ಆದರೆ ಕಂಪೆನಿಗಳ ಆಧಾರ ಸ್ತಂಭವೇ ಆಗಿರುವ ನೌಕರರೊಂದಿಗೆ ವ್ಯವಹರಿಸುವಾಗ, ಅವರಿಗೆ ಕಾನೂನು ಮಾಹಿತಿ ನೀಡುವಾಗ, ಅವರಿಂದ ಉತ್ತಮ ಕೆಲಸವನ್ನು ತೆಗೆಯುವಾಗ ಮತ್ತು ಸಂವಹಿಸುವಾಗ ಅವರಿಗೆ ಅರ್ಥವಾಗುವ ಸ್ಥಳೀಯ ಭಾಷೆ ಅತ್ಯಾವಶ್ಯಕ. ಕಂಪೆನಿಯ ವ್ಯಾಜ್ಯಗಳಿಗೆ ಸಂಬಂಧಿಸಿದ ಸರ್ಕಾರದೊಂದಿಗೆ ಜರುಗುವ ಪತ್ರ ವ್ಯವಹಾರಗಳೂ ಸಹ ಸ್ಥಳೀಯ ಭಾಷೆಯಲ್ಲಿಯೇ ನಡೆಯಬೇಕು ಎಂಬ ಕಾನೂನು ಬಂದ ಮೇಲಂತೂ ಕರ್ನಾಟಕದಲ್ಲಿ ಕನ್ನಡ ಭಾಷೆ ಅನಿವಾರ್ಯವಾಗಿದೆ.
Picture
Join Our Conference Google Group
ವಿಶೇಷವಾಗಿ ಮಾನವ ಸಂಪನ್ಮೂಲ ವಿಭಾಗದಲ್ಲಿ ಕೇವಲ ಮಾನವ ಸಂಪನ್ಮೂಲ ನಿರ್ವಹಣೆ ಮಾತ್ರವಲ್ಲದೆ ಮಾನವ ಸಂಬಂಧಗಳ ನಿರ್ವಹಣೆಯಾಗಿದೆ. ಈ ವಿಭಾಗಲ್ಲಿ ಕಾರ್ಯನಿರ್ವಹಿಸುವವರು ಸಂಸ್ಥೆಯಲ್ಲಿ ಕಾರ್ಯನಿರತಗೊಂಡ ಕಾರ್ಮಿಕರು ಮತ್ತು ಆಡಳಿತ ವರ್ಗದವರ ನಡುವೆ ಸಂಪರ್ಕ ಸೇತುವೆಯಂತೆ ಕಾರ್ಯ ನಿರ್ವಹಿಸುವ ಜವಬ್ದಾರಿ ಹೊಂದಿರುತ್ತಾರೆ. ಈ ನಿಟ್ಟಿನಲ್ಲಿ ಆಡಳಿತ ವರ್ಗದವರೊಂದಿಗೆ ಸಂವಹನ ಮಾಡಲು ಆಂಗ್ಲ ಭಾಷೆಯ ಅವಶ್ಯಕತೆಯಿದೆ ಆದರೆ ಆಡಳಿತ ವರ್ಗದವರಿಂದ ರೂಪುಗೊಂಡ ಸಂಸ್ಥೆಗೆ ಸಂಬಂಧಿಸಿದ ನೀತಿ, ನಿಯಮಗಳು, ನಿರ್ಧಾರಗಳು, ಇತ್ಯಾದಿಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಕಾರ್ಮಿಕರಿಗೆ ತಿಳಿಸಲು ಕನ್ನಡ ಭಾಷೆಯ ಪ್ರಸ್ತುತತೆಯಿದೆ. ಸಾಮಾನ್ಯವಾಗಿ ಕಾರ್ಮಿಕರು ಕನ್ನಡ ಭಾಷೆಯನ್ನು ಆಡು ಭಾಷೆಯಾಗಿ ಬಳಸುತ್ತಿದ್ದು ಸಂಸ್ಥೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಅರ್ಥೈಸಿಕೊಳ್ಳುವಲ್ಲಿ ಕನ್ನಡ ಭಾಷೆಯ ಬಳಕೆ ಹೆಚ್ಚು ಸೂಕ್ತವಾಗಿದೆ.

ಮಾನವ ಸಂಪನ್ಮೂಲ ಕ್ಷೇತ್ರದಲ್ಲಿ ನೇಮಕಾತಿ ಪ್ರಕ್ರಿಯೆ ಎಂಬುದು ಬಹುಮುಖ್ಯವಾದ ಹೊಣೆಗಾರಿಕೆಯಾಗಿದೆ. ಸಂಸ್ಥೆಗೆ ನೇಮಕಗೊಂಡ ಕಾರ್ಮಿಕರಿಗೆ ಸಂಬಂಧಿಸಿದ ವೈಯಕ್ತಿಕ ದಾಖಲೆಯಲ್ಲಿ ನೇಮಕಾತಿ ಪತ್ರಗಳನ್ನೊಳಗೊಂಡಂತೆ ಕಾನೂನಾತ್ಮಕವಾಗಿ ನೀಡುವ  ಉಪಧನ (ಗ್ರಾಚ್ಯುಟಿ), ಬೋನಸ್, ರಾಜ್ಯ ಕಲ್ಯಾಣ ಕಾರ್ಮಿಕರ ವಿಮೆ (ಇ.ಎಸ್,ಐ), ಕಾರ್ಮಿಕರ ಭವಿಷ್ಯನಿಧಿ (ಇ.ಪಿ.ಎಫ್), ಸೌಲಭ್ಯಗಳಿಗೆ ಸಂಬಂಧಿಸಿದ ಮಾಹಿತಿ ನೀಡುವ ದಾಖಲೆಗಳು ಕನ್ನಡ ಭಾಷೆಯ ಪ್ರತಿಗಳನ್ನೊಳಗೊಂಡಿರುತ್ತದೆ. ಅಲ್ಲದೆ ನೂತನವಾಗಿ ನೇಮಕಗೊಂಡ ಕಾರ್ಮಿಕರಿಗೆ ಸಂಸ್ಥೆಗೆ ಸಂಬಂಧಿಸಿದ ನೀತಿನಿಯಮಗಳು, ಕಾನೂನಾತ್ಮಕವಾಗಿ ಹಾಗೂ ಕಾನೂನೇತರವಾಗಿ ಸಂಸ್ಥೆಯು ಸ್ವ ಇಚ್ಚೆಯಿಂದ ನೀಡುವ ಸೌಲಭ್ಯಗಳು, ಮುಂತಾದ ಮಾಹಿತಿಯನ್ನು ಕಾರ್ಮಿಕರಿಗೆ ನೀಡಲು ಸಂಸ್ಥೆಯ ಪರಿಚಯ (Induction) ಕಾರ್ಯಕ್ರಮ ಮತ್ತು ಕಾರ್ಮಿಕರಿಗೆ ನೀಡುವ ಕಿರುಹೊತ್ತಿಗೆ (ಹ್ಯಾಂಡ್‍ಬುಕ್) ಕನ್ನಡ ಭಾಷೆಯ ಆಧಾರಿತವಾಗಿದೆ. ಇವುಗಳ ಜೊತೆಗೆ ಆಡಳಿತ ವರ್ಗದವರು ಕೈಗೊಂಡ ನಿರ್ಧಾರಗಳು, ಸಮಿತಿ ಸಭೆಗಳಿಗೆ ಸಂಬಂಧಿಸಿದ ಸುತ್ತೋಲೆಗಳು, ಸಾರ್ವತ್ರಿಕ ರಜೆಗಳು ಮತ್ತು ಸಾಮಾನ್ಯ ಮಾಹಿತಿಗಳನ್ನು ಕಾರ್ಮಿಕರಿಗೆ ತಿಳಿಸಲು ಸಾರ್ವತ್ರಿಕ ಪ್ರಕಟಣೆ ಪದ್ದತಿಯನ್ನು ಅಳವಡಿಸಿದ್ದು ಕನ್ನಡ ಭಾಷೆಗೆ ಆಧ್ಯತೆ ನೀಡಲಾಗಿದೆ.
​
ಕಂಪನಿಗೆ ಸಂಬಂಧಿಸಿದ ನೀತಿ ನಿಯಮಗಳು, ಸ್ಥಾಯಿ ಆದೇಶಗಳು, ರಜಾದಿನಗಳು ಕಾನೂನಾತ್ಮಕವಾಗಿ ಮತ್ತು ಕಾನೂನೇತರವಾಗಿ ಸಂಬಂಧಿಸಿದ ಸುತೋಲೆಗಳು, ವರದಿಗಳು ಮುಂತಾದ ಮಾಹಿತಿಗಳನ್ನು ಸೂಚನ ಫಲಕದಲ್ಲಿ ಭಿತ್ತರಿಸುವುದು ಮುಖ್ಯ ಕಾರ್ಯವಾಗಿದ್ದು ಆ ಮಾಹಿತಿ ಕನ್ನಡ ಭಾಷೆಯಲ್ಲಿದೆ ಎಂಬುದು ನಂಬಲರ್ಹ ಸಂಗತಿ. ಅಲ್ಲದೆ ಇತ್ತಿಚೆಗೆ ತಂತ್ರಜ್ಙಾನವು ಅಭಿವೃದ್ಧಿ ಪಥದತ್ತ ಸಾಗುತ್ತಿದ್ದು ಮಾನವ ಸಂಪನ್ಮೂಲ ವಿಭಾಗಕ್ಕೆ ಸಂಬಂದಿಸಿದಂತೆ ಅದೆಷ್ಟೋ ಮಾಹಿತಿಗಳನ್ನು ಕನ್ನಡ ಭಾಷೆಯಲ್ಲಿ ಒದಗಿಸುತ್ತಿರುವುದು ಗಮನಿಸಲೇಬೇಕಾದ ವಿಚಾರ. ಮಾನವ ಸಂಪನ್ಮೂಲ ವಿಭಾಗದ ಬಗ್ಗೆ ಕಾರ್ಮಿಕರಲ್ಲಿ ಧನಾತ್ಮಕ ಭಾವನೆಯಿದ್ದು, ಇವರು ತಮ್ಮ ಕುಂದು ಕೊರತೆಗಳು, ಗೊಂದಲಗಳಿಗೆ ಸಂಬಂದಿಸಿದ ಮಾಹಿತಿಗಳನ್ನು ಪಡೆಯುವ ಸಲುವಾಗಿ ವಿಭಾಗದ ನಿರ್ವಹಣಾ ಅಧಿಕಾರಿ ಬಳಿ ಬಂದಾಗ ಆ ಮಾಹಿತಿ ನೀಡಿ ಅರ್ಥೈಸುವಲ್ಲಿ ಕನ್ನಡ ಭಾಷೆಯು ತನ್ನ ಪ್ರಸ್ತುತತೆಯನ್ನು ಉಳಿಸಿಕೊಂಡಿದೆ ಎಂದರೆ ತಪ್ಪಾಗದು.
 
ಉಪಸಂಹಾರ:     
ಮಾನವ ಸಂಪನ್ಮೂಲ ನಿರ್ವಹಣೆ ಎಂಬ ವಿಷಯವು ಸದ್ಯದ ಪರಿಸ್ಥಿತಿಯಲ್ಲಿ ಕಂಪನಿಗಳಿಗೆ ಅನಿವಾರ್ಯವಾಗಿದ್ದು, ತನ್ನ ವಿಸ್ತೃತವಾದ ಪ್ರಪಂಚದಲ್ಲಿ ಬೃಹತ್ತಾಗಿ ಬೆಳೆಯಬೇಕಾದ ಸಮಯ ಬಂದಿದೆ. ವಿವಿಧ ಸಂಘ-ಸಂಸ್ಥೆ, ಕಾರ್ಖಾನೆ ಮತ್ತು ಕಂಪನಿಗಳಲ್ಲಿ ಕೆಲಸ ಮಾಡುವ ಕಾರ್ಮಿಕ ನೌಕರ ವರ್ಗದವರು ತಮ್ಮ ಉದ್ಯೋಗದಾತರೊಂದಿಗೆ ಸೌಹಾರ್ಧಯುತ ಸಂಬಂಧವನ್ನು ಹೊಂದುವ ಸಲುವಾಗಿ ಮಾನವ ಸಂಪನ್ಮೂಲ ವಿಷಯವನ್ನು ಒಂದು ಸುವ್ಯವಸ್ಥಿತ ಅಬ್ಯಾಸ ಕ್ರಮವಾಗಬೇಕಿದೆ. ಮುಕ್ತ ಮಾರುಕಟ್ಟೆ ನೀತಿಯ ಪ್ರತಿಫಲದಿಂದ ಪ್ರಪಂಚದ ನಾನಾ ಮೂಲೆಗಳಲ್ಲಿ ತಲೆಯೆತ್ತುತ್ತಿರುವ ಬಹುರಾಷ್ಟ್ರೀಯ ಕಂಪೆನಿಗಳು ಮತ್ತು ಅವುಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ಭಾಷಾ ಸಮಸ್ಯೆಯನ್ನು ಅನುಭವಿಸುತ್ತಿರುವುದು ಇತ್ತೀಚಿನ ದಿನಗಳಲ್ಲಿ ಸರ್ವೇ ಸಾಮಾನ್ಯವಾಗಿದೆ. ಕೈಗಾರಿಕೆಯಲ್ಲಿ ಮಾನವ ಸಂಪನ್ಮೂಲ ಅಧಿಕಾರಿಗಳು ಪ್ರಮುಖವಾಗಿ ಆಂಗ್ಲ ಭಾಷೆಯನ್ನು ಆಡಳಿತ ಭಾಷೆಯನ್ನಾಗಿ ಮಾಡಿಕೊಂಡಿದ್ದಾರೆ. ಇದರಿಂದ ಅಲ್ಪಸ್ವಲ್ಪ ಓದಿಕೊಂಡಿರುವ ಕಾರ್ಮಿಕರು ಭಾಷಾ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಕಾರ್ಮಿಕರ ಕಾರ್ಯಕ್ಷಮತೆಯ ಮೇಲೆ ಒಂದು ಕೈಗಾರಿಕೆಯ ಅಳಿವು ಉಳಿವು ನಿಂತಿರುವ ಕಾರಣ, ಮಾನವ ಸಂಪನ್ಮೂಲ ಅಧಿಕಾರಿಗಳು ಕಾರ್ಮಿಕರೊಂದಿಗೆ ವ್ಯವಹರಿಸುವಾಗ ಸ್ಥಳೀಯ ಭಾಷೆಯನ್ನು ಬಳಸುವುದು ಅನಿವಾರ್ಯವಾಗಿದೆ. ದೈನಂದಿನ ಕೆಲಸಕಾರ್ಯಗಳಲ್ಲಿ ಬಳಸುವ ಭಾಷೆ ಸ್ಥಳೀಯ ಭಾಷೆಯಾಗಿದ್ದರೆ ಕೈಗಾರಿಕೆಗಳನ್ನು ಅಭಿವೃದ್ದಿಯತ್ತ ಕೊಂಡೊಯ್ಯುವಲ್ಲಿ ಸಹಾಯಕವಾಗುತ್ತದೆ. ಕೊನೆಯದಾಗಿ ಮಾನವ ಸಂಪನ್ಮೂಲ ವಿಭಾಗವು ಕಾರ್ಮಿಕರು ಮತ್ತು ಆಡಳಿತ ವರ್ಗದವರೊಂದಿಗೆ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸುವ ಕ್ರಿಯಾತ್ಮಕ ತಂಡವಾಗಿದ್ದು, ನಮ್ಮ ಭಾಷೆಯ ಬಳಕೆಯಿಂದ ಮಾಹಿತಿ ನೀಡುವ ಮೂಲಕ ಭಾಷೆಯ ಪ್ರಸ್ತುತತೆಗೆ ಅವಕಾಶ ಕಲ್ಪಿಸಿದೆ. ಈ ನಿಟ್ಟಿನಲ್ಲಿ ಕರ್ನಾಟಕದಲ್ಲಿ ಕನ್ನಡ ಭಾಷೆಯ ಅಗತ್ಯ ಅನಿವಾರ್ಯತೆ ಇದೆಯಾದರೂ ಆಂಗ್ಲ ಭಾಷೆಯ ಅವಶ್ಯಕತೆಯೂ ಇಲ್ಲದಿಲ್ಲ. ಪ್ರಪಂಚದ 6000 ಭಾಷೆಗಳಲ್ಲಿ ಗಟ್ಟಿಯಾಗಿ ಹಾಗೂ ಪ್ರಭಾವಿ ಎನಿಸಿಕೊಂಡಿರುವ ಭಾಷೆಗಳಲ್ಲಿ 19 ಭಾಷೆಗಳಲ್ಲಿ ಕನ್ನಡ ಭಾಷೆಯೂ ಒಂದು ಎಂಬುದು ಕನ್ನಡಿಗರ ಹೆಮ್ಮೆ. ಇದೇ ಹೆಮ್ಮೆಯಿಂದ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಎಂಬ ಬಿ.ಎಂ.ಶ್ರೀಕಂಠಯ್ಯನವರ ಕಾವ್ಯ ಪ್ರೇರಣೆಯಿಂದ ಕನ್ನಡವನ್ನು ಬಳಸೋಣ, ಕನ್ನಡವನ್ನು ಉಳಿಸೋಣ.
0 Comments



Leave a Reply.

    Picture
    Nirathanka

    Categories

    All
    Awards 2017
    Awards 2018
    Awards 2019
    Awards 2020
    Awards 2021
    Awards 2022
    English Articles
    ಇತರೆ
    ಕನ್ನಡ ಲೇಖನಗಳು
    ಸಭೆಯ ನಡಾವಳಿಗಳು
    ಸಮ್ಮೇಳನದ ಕುರಿತು ಅಭಿಪ್ರಾಯಗಳು
    ಹನಿಗವನ

    Archives

    December 2022
    November 2022
    November 2021
    March 2021
    November 2020
    July 2020
    November 2019
    October 2019


    Picture
    More Details

    Picture
    WhatsApp Group

    Picture
    30,000 HR PROFESSIONALS ARE CONNECTED THROUGH OUR NIRATHANKA HR GROUPS.
    YOU CAN ALSO JOIN AND PARTICIPATE IN OUR GROUP DISCUSSIONS.
    Join Now


    RSS Feed

ಸೈಟ್ ನಕ್ಷೆ


ಸೈಟ್

  • ಸ್ವಾಗತ
  • ಸಮಿತಿಯ ಸದಸ್ಯರು
  • ಮಾಧ್ಯಮ​
  • ಆನ್‍ಲೈನ್‍ ಗ್ರೂಪ್ಸ್
  • ಬ್ಲಾಗ್
  • ಸಮ್ಮೇಳನದ ಕೈಪಿಡಿಗಳು

ನಮ್ಮ ಇತರೆ ಜಾಲತಾಣಗಳು

  • ​WWW.NIRATANKA.ORG
  • WWW.NIRUTAPUBLICATIONS.ORG

ಪ್ರಶಸ್ತಿಗಳು

  • CSR EXCELLENCE AWARD
  • THE BEST WOMEN EMPOWERMENT ORGANISATION AWARD
  • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2022

ಕನ್ನಡ ಸಮ್ಮೇಳನ

​ಕನ್ನಡ ಸಮ್ಮೇಳನ-2017
​ಕನ್ನಡ ಸಮ್ಮೇಳನ-2018
​ಕನ್ನಡ ಸಮ್ಮೇಳನ-2019
​ಕನ್ನಡ ಸಮ್ಮೇಳನ-2020
​ಕನ್ನಡ ಸಮ್ಮೇಳನ-2021
​ಕನ್ನಡ ಸಮ್ಮೇಳನ-2022

ಪಬ್ಲಿಕೇಷನ್ಸ್

  • LEADER'S TALK
  • NIRUTA'S READ & WRITE INITIATIVE​​
  • ​COLLABORATE WITH NIRUTA PUBLICATIONS

ನಿರಾತಂಕ

  • POSH
  • CSR
  • COLLABORATE WITH NIRATHANKA
  • NIRATHANKA CLUB HOUSE

ಚಂದಾದಾರರಾಗಿ




JOIN OUR ONLINE GROUPS


JOIN WHATSAPP BROADCAST

Copyright : Nirathanka 2021
Website Designed & Developed by 
M&HR Solutions Private Limited (www.mhrspl.com)
  • ಸ್ವಾಗತ
    • ನಿರಾತಂಕ ಕುರಿತು
    • ಸಮಿತಿಯ ಸದಸ್ಯರು
    • ಪ್ರಶಸ್ತಿ ಪುರಸ್ಕೃತರು
  • ಸಮ್ಮೇಳನ-2022
    • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2022
    • ಮಹಿಳಾ ಸಬಲೀಕರಣ ಪ್ರಶಸ್ತಿ-2022
    • ಅತ್ಯುತ್ತಮ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್
    • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2022
  • ಹಿಂದಿನ ಸಮ್ಮೇಳನಗಳು
    • 2021
      • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2021
      • ಪ್ರಶಸ್ತಿ ಪುರಸ್ಕಾರ - 2021
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2021
    • 2020
      • ದೇಣಿಗೆ ಸಂಗ್ರಹಣ-2020
      • ಲೇಖನಗಳಿಗಾಗಿ ಆಹ್ವಾನ - 2020
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2020
    • 2019
      • ತೃತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ದೇಣಿಗೆ ಸಂಗ್ರಹಣ
    • 2018
      • ದ್ವಿತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
    • 2017
      • ಪ್ರಥಮ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2017
  • ಆನ್ ಲೈನ್ ಗ್ರೂಪ್ಸ್
  • ಬ್ಲಾಗ್
  • ಮಾಧ್ಯಮ
    • ಛಾಯಾಚಿತ್ರಗಳು
    • ವಿಡಿಯೋ
  • ಪ್ರಾಯೋಜಕತ್ವ
  • ಸಮ್ಮೇಳನದ ಕೈಪಿಡಿಗಳು
  • ಸಂಪರ್ಕಿಸಿ